74ನೇ ಗಣರಾಜ್ಯೋತ್ಸವದ ಅಂಗವಾಗಿ ಮಾನ್ವಿ ಕೆರೆ ದಂಡೆಯಲ್ಲಿ ಧ್ವಜಾರೋಹಣ

ಮಂಗಳೂರು: ತಾ.ಪಂ/ ಜೋಕಟ್ಟೆ ಗ್ರಾ.ಪಂ: 74ನೇ ಗಣರಾಜ್ಯೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಯೋಜನೆಯಡಿ ಮಂಗಳೂರು ತಾಲೂಕಿನ ಜೋಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾನ್ವಿ ಕೆರೆ ದಂಡೆಯಲ್ಲಿ ಹಿರಿಯ ನಾಗರಿಕರಾದ ಶ್ರೀಮತಿ ಬೆನ್ನಿ ವೇಗಸ್ ಅವರು ಧ್ವಜಾರೋಹಣ ನೆರವೇರಿಸಿದರು.

ಇತ್ತೀಚೆಗಷ್ಟೇ ಜೋಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಜಲ ಸಂರಕ್ಷಣೆಗೆ ಸಂಬಂಧಪಟ್ಟಂತೆ ಚಿತ್ರಕಲಾ ಸ್ಪರ್ಧೆ ಆಯೋಜಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಈ ಸುಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.

ಈ ಸಂದರ್ಭ ಶ್ರೀ ಉಮ್ಮರ್‌ ಫಾರುಕ್ ಪಂಚಾಯತ್‌ ಅಧ್ಯಕ್ಷರು , ಶ್ರೀ ಅಬ್ದುಲ್ಲಾ ಆಸಫ್‌ ಪಂಚಾಯತ್‌ ಅಭಿವೃದ್ದಿ ಅಧಿಕಾರಿ , ಸದಸ್ಯರು ಪ್ರೆಸಿಲ್ಲಾ ಮೊಂತೇರೊ, ಶ್ರೀಮತಿ ನಿಶ್ಮಿತ. ಬಿ ತಾಲೂಕು ಪಂಚಾಯತ್‌ ಐಇಸಿ ಸಂಯೋಜಕರು ಹಾಗೂ ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Check Also

ಮಂಗಳೂರು : ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮಂಗಳೂರು : ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ …

Leave a Reply

Your email address will not be published. Required fields are marked *

You cannot copy content of this page.