ಮಂಗಳೂರು: ಮನೆಯ ಕಾಂಪೌಂಡ್ ಕುಸಿತ: ಒಂದೇ ಕುಟುಂಬದ ನಾಲ್ವರು ಮೃತ್ಯು

ಮಂಗಳೂರು:  ಮನೆಯ ಆವರಣದ ಕಾಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ನಡೆದಿದೆ.

ಮೃತರನ್ನು ಯಾಸಿರ್ (45), ಅವರ ಪತ್ನಿ ಮರಿಯಮ್ಮ (40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.

ನೆರೆಮನೆಯ ಅಬೂಬಕ್ಕರ್ ಎಂಬವರ ಮನೆಯ ಕಾಂಪೌಂಡ್ ಬುಧವಾರ ಬೆಳಗ್ಗೆ ಏಕಾಏಕಿ ಕುಸಿದು ಯಾಸಿರ್ ಅವರ ಮನೆಯ ಗೋಡೆಯ ಮೇಲೆ ಬಿದ್ದಿದೆ. ಇದರಿಂದಾಗಿ ಯಾಸಿರ್ ಅವರ ಮನೆಯ ಗೋಡೆಯೂ ಕೂಡಾ ಕುಸಿದು ಮನೆಯೊಳಗಿದ್ದ ನಾಲ್ವರ ಮೇಲೆ ಬಿದ್ದಿದೆ.

ಈ ಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯ ಪ್ರಾರಂಭಿಸಿದದಾರೆ. ಆದರೆ ಮೂವರ ಮೃತದೇಹ ಪತ್ತೆಯಾಗಿದೆ. ಓರ್ವ ಬಾಲಕಿ ಮೃತದೇಹಕ್ಕಾಗಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ.

Check Also

ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ …

Leave a Reply

Your email address will not be published. Required fields are marked *

You cannot copy content of this page.