June 1, 2025 10:07:56 AM
WhatsApp Image 2023-10-26 at 2.57.10 PM

ಕಾಪು: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಕಲ್ಲಟ್ಟ ಎಂಬಲ್ಲಿ ಸಂಭವಿಸಿದೆ. ಕಲ್ಲಟ್ಟ ನಿವಾಸಿ ಆನಂದ ಪೂಜಾರಿ ಅವರ ಪುತ್ರಿ ಅನನ್ಯಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶಂಕರಪುರ ಸೈಂಟ್ ಜೋನ್ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಈಕೆ ರಾತ್ರಿ ತಂದೆ ತಾಯಿ ಮತ್ತು ಸಹೋದರನೊಂದಿಗೆ ಒಂದೇ ಕೋಣೆಯಲ್ಲಿ ಮಲಗಿದ್ದು, ಬಳಿಕ ಪಕ್ಕದ ಕೋಣೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಓದಿನಲ್ಲಿ ಚುರುಕಾಗಿದ್ದ ಅನನ್ಯ ಎಲ್ಲರೊಂದಿಗೂ ಅನ್ನೋನ್ಯವಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾಳೆ. ಕಾಪು ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>