![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಉಪ್ಪಿನಂಗಡಿ : ಕಾರುಗಳ ನಡುವೆ ಸರಣಿ ಅಪಘಾತವಾದ ಘಟನೆ ಉಪ್ಪಿನಂಗಡಿ ಬಳಿಯ ನೇತ್ರಾವತಿ ಸೇತುವೆಯಲ್ಲಿ ನಡೆದಿದ್ದು ಉಪ್ಪಿನಂಗಡಿಯಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರೊಂದು ಹಠಾತ್ ಬ್ರೇಕ್ ಹಾಕಿದ್ದು, ಈ ವೇಳೆ ಒಂದರ ಹಿಂದೆ ಒಂದರಂತೆ ಒಟ್ಟು ನಾಲ್ಕು ಕಾರುಗಳು ಡಿಕ್ಕಿ ಹೊಡೆದಿವೆ. ಅಪಘಾತದಿಂದ ಕಾರುಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸಕಾಲದಲ್ಲಿ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಟ್ರಾಫಿಕ್ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.