March 5, 2026
WhatsApp Image 2023-02-27 at 10.48.31 AM

ಮಂಗಳೂರು : ಮಾದಕ ವ್ಯಸನಿ ದುಷ್ಕರ್ಮಿಗಳು ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ನಿನ್ನೆ ಸಂಜೆ ಮಂಗಳೂರು ಹೊರವಲಯದ ಸುರತ್ಕಲ್ ನ ಚಿತ್ರಾಪುರ ಸಮೀಪದ ಕಡಲ ಕಿನಾರೆಯಲ್ಲಿ ನಡೆದಿದೆ.

ಘಟನೆಯಲ್ಲಿ ಆಟೋ ಚಾಲಕ ಸುನೀಲ್ ಎಂಬವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ,  ಹಲ್ಲೆ ನಡೆಸಿದ ಇಬ್ಬರು ಆರೋಪಿಗಳಲ್ಲಿ ಓರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು ಅಮನ್  ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಗಳು ಬಳಸಿದ್ದ ದ್ವಿಚಕ್ರವಾಹನವನ್ನೂ ವಶಕ್ಕೆ ಪಡೆಯಲಾಗಿದೆ. ಮತ್ತೋರ್ವ  ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ. ಈ ಪ್ರದೇಶದಲ್ಲಿ ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳಿಂದ ಅನೈತಿಕ ದಂಧೆ ನಡೆಯುತ್ತಿದ್ದು, ಈ ಕುರಿತು ಸ್ಥಳೀಯರು ಎಚ್ಚರಿಕೆ ನೀಡಿದ್ದರು. ಇದರಿಂದ ದುಷ್ಕರ್ಮಿಗಳು ಈ ಸೇಡಿನ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಇದೇ ತಂಡ ಕೆಲ ದಿನಗಳ ಹಿಂದೆ ಪಣಂಬೂರು ಮೊಗವೀರ ಸಭಾ ಅಧ್ಯಕ್ಷ ಮಾಧವ ಸುವರ್ಣರಿಗೂ ಬೆದರಿಕೆ ಹಾಕಿದ್ದು ಪೋಲಿಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.