![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಉಡುಪಿ : ರಿಕ್ಷಾ ಚಾಲಕರೊಬ್ಬರಿಗೆ ಐದು ಮಂದಿಯ ತಂಡವೊಂದು ಹಲ್ಲೆ ನಡೆಸಿರುವ ಘಟನೆ ರಾತ್ರಿ ವೇಳೆ ಕಲ್ಸಂಕ ಬಳಿ ಸಂಭವಿಸಿದೆ. ಪುತ್ತೂರು ಅಡ್ಕದಕಟ್ಟೆಯ ಮಂಜುನಾಥ(40) ಎಂಬವರು ತಮ್ಮ ರಿಕ್ಷಾ ಚಲಾಯಿಸಿಕೊಂಡು ಬರುತ್ತಿರುವಾಗ ರಸ್ತೆ ಬದಿ ಎರಡು ಬೈಕ್ ಗಳಲ್ಲಿ ಬಂದ 5 ಮಂದಿ ಯುವಕರು ಬಾಟಲಿಯನ್ನು ರಸ್ತೆಯ ಮೇಲೆ ಹಾಕಿದ್ದರು. ಇದನ್ನು ಪ್ರಶ್ನಿಸಿದಕ್ಕಾಗಿ ಚಾಲಕ ಮಂಜುನಾಥ್ ಅವರಿಗೆ ಐವರ ತಂಡ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆ ನಡೆಸಿ ಆರೋಪಿಗಳು ತಮ್ಮ ಎರಡು ಬೈಕಿನಲ್ಲಿ ಪರಾರಿಯಾದರು ಎಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.