ಪುತ್ತೂರು : ಮಾದಕ ದ್ರವ್ಯ ಸೇವನೆ – ನಾಲ್ವರು ವಶಕ್ಕೆ

ಉಪ್ಪಿನಂಗಡಿ: ಮಾದಕ ದ್ರವ್ಯ ಸೇವನೆಯ ಎರಡು ಪ್ರತ್ಯೇಕ – ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಫೆ.26ರಂದು ಬೆಳಗ್ಗೆ 34 ನೆಕ್ಕಿಲಾಡಿ ಜಂಕ್ಷನ್ ಬಳಿ ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಸವಣೂರು ಗ್ರಾಮದ ಪಿ. ಹನೀಫ್ (45) ಹಾಗೂ ಮುಹಮ್ಮದ್ ಶಾಫಿ (27) ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಇವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವೆನೆ ಮಾಡಿರುವುದು ದೃಢಪಟ್ಟಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಫೆ.26ರಂದು ಬೆಳಗ್ಗೆ ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸವಣೂರು ಗ್ರಾಮದ ನವಾಝ್ ಮಾಂತೂರು (35) ಹಾಗೂ ಪ್ರಮೋದ್ ಕೆ. ಎಂಬವರು ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಇವರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ನವಾಝ್ ಮಾಂತೂರು ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Check Also

ಮಂಗಳೂರು : ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮಂಗಳೂರು : ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ …

Leave a Reply

Your email address will not be published. Required fields are marked *

You cannot copy content of this page.