

ಪುತ್ತೂರು: ಪುತ್ತೂರಿನ ಪುರುಷರ ಕಟ್ಟೆ ಎಂಬಲ್ಲಿ ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ಎರಡು ಕಡೆಗಳಿಂದ ದೂರು ದಾಖಲಾಗಿದೆ.
ಪುರುಷರ ಕಟ್ಟೆಯಲ್ಲಿರುವ ಸಾಪ್ಟ್ ಡ್ರಿಂಕ್ ಪ್ಯಾಕ್ಟರಿ ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಗಳನ್ನು ಪ್ಲಶ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಈ ಪರಿಸರದಲ್ಲಿ ಹೊಸದಾಗಿ ಬೋರ್ ವೆಲೆ ತೆಗೆಯುತ್ತಿದ್ದಾರೆ ಎಂದು ಆರೋಪಿಸಿ ಕೆಲವು ಕಿಡಿಗೇಡಿಗಳು ಬೋರ್ ವೆಲ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಎರಡೂ ಕಡೆ ಗುಂಪುಗಳಿಂದ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.