ಮಣಿಪಾಲ: ಚಾಲಕನಿಗೆ ಮೂರ್ಛೆ ರೋಗ- ಹಿಮ್ಮುಖವಾಗಿ ಚಲಿಸಿದ ಬಸ್

ಡುಪಿ: ಮಣಿಪಾಲದಿಂದ ಹೆರ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ತೋಡಿಗೆ ಬಿದ್ದ ಘಟನೆ ಗುರುವಾರ ಸಂಜೆ ನಡೆದಿದೆ.

ಕೆಳಪರ್ಕಳದ ಬಳಿ ತೆರಳುತ್ತಿದ್ದಾಗ ಚಾಲಕನ ಮೂರ್ಛೆ ಬಂದಿದ್ದು ಕೂಡಲೇ ಅವರು ಸ್ಟೇರಿಂಗ್‌ ಬಿಟ್ಟಿದ್ದಾರೆ.

ಈ ವೇಳೆ ಬಸ್‌ ಹಿಮ್ಮುಖವಾಗಿ ಚಲಿಸಿದೆ. ಕೂಡಲೇ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಹಾರಲು ಯತ್ನಿಸಿದ್ದಾರೆ. ಬಸ್‌ ತೋಡಿಗೆ ಬಿದ್ದು ಅಲ್ಲೇ ನಿಂತಿದೆ. ಸ್ವಲ್ಪ ಹಿಂದಕ್ಕೆ ತೆರಳುತ್ತಿದ್ದರೆ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆಯುವ ಸಾಧ್ಯತೆಯಿತ್ತು. ಬಸ್ಸಿನಲ್ಲಿ 30-40 ಮಂದಿ ಪ್ರಯಾಣಿಕರು ಇದ್ದರು. ಚಾಲಕನನ್ನು ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.

ಪ್ರಯಾಣಿಕರು ಮತ್ತೊಂದು ಬಸ್ಸಿನಲ್ಲಿ ತೆರಳಿದ್ದಾರೆ. ಬಸ್ಸಿನ ಹಿಂಭಾಗ ಜಖಂಗೊಂಡಿದೆ.

Check Also

ಉಡುಪಿ: ಪರ್ಕಳದ ಕೆರೆದಂಡೆ ನಾಲ್ಕನೇ ಬಾರಿ ಕುಸಿತ, ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಪರ್ಕಳ: ಇಲ್ಲಿನ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಎದುರುಗಡೆ ನಿರ್ಮಾಣವಾಗುತ್ತಿರುವ ಕೆರೆ ಈ ಬಾರಿಯೂ ಸಾಧಾರಣ ಮಳೆಗೇ ಕುಸಿದಿದೆ. ಸ್ಥಳಕ್ಕೆ ಉಡುಪಿ …

Leave a Reply

Your email address will not be published. Required fields are marked *

You cannot copy content of this page.