ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿಯ ಹೆಮ್ಮಾಡಿ ಸಮೀಪದ ರಾಜಾಡಿಯಲ್ಲಿ ನಡೆದಿದೆ.

ಕನ್ಯಾನ ಗ್ರಾಮದ ನಿವಾಸಿ ದಿ. ಕುಪ್ಪಯ್ಯ ಶೆಟ್ಟಿ ಎಂಬುವರ ಪುತ್ರ ರವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡವರು. ರವಿರಾಜ್ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಶನಿವಾರ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಆದರೆ ತಾಯಿಗೆ ಏನೂ ಹೇಳದೆ ಹೆಮ್ಮಾಡಿ ಸಮೀಪದ ರಾಜಾಡಿಯ ಹೆದ್ದಾರಿಯಲ್ಲಿರುವ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.