December 5, 2025
WhatsApp Image 2025-11-29 at 3.05.55 PM

ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಅಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ.

ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಫೋಲಿಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ. ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರ ಸಹಕಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗೋಶಾಲೆಯಿಂದ ಗೋವುಗಳಿಗೆ ಬೈಹುಲ್ಲು ವ್ಯವಸ್ಥೆ ಮಾಡಲಾಗಿದೆ.

ಈ ಅಕ್ರಮ ಗೋಸಾಗಾಟವನ್ನು ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ವತಿಯಿಂದ ಉಗ್ರವಾಗಿ ಖಂಡಿಸುತ್ತೇವೆ ಹಾಗೂ ತಕ್ಷಣ ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಆಗ್ರಹಿಸುತ್ತದೆ.

About The Author

Leave a Reply

Your email address will not be published. Required fields are marked *

You cannot copy content of this page.