ಪುತ್ತೂರು: ಕಾರು-ಲಾರಿ ಅಪಘಾತ- ಕಾರಲ್ಲಿದ್ದ ಮೆಸ್ಕಾಂ ಅಧಿಕಾರಿಗೆ ಗಂಭೀರ ಗಾಯ

ಪುತ್ತೂರು: ಇಕೋಸ್ಪೋರ್ಟ್ಸ್ ಕಾರು ಹಾಗೂ ಈಚರ್ ಲಾರಿ ಮಧ್ಯೆ ಅಪಘಾತ ಸಂಭವಿಸಿ ಕಾರಲ್ಲಿದ್ದ ಮೆಸ್ಕಾಂ ಅಧಿಕಾರಿ ಗಂಭೀರ ಗಾಯಗೊಂಡಿರುವ ಘಟನೆ ದ.28ರಂದು ತಡರಾತ್ರಿ 12.25ರ ಸುಮಾರಿಗೆ ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂದಿರದ ತಿರುವಿನಲ್ಲಿ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಇಕೋಸ್ಪೋರ್ಟ್ಸ್ ಕಾರು (ಕೆಎ 21ಪಿ-9416)ಮತ್ತು ಎದುರುಗಡೆಯಿಂದ ಬರುತ್ತಿದ್ದ ಈಚರ್ ಲಾರಿ(ಕೆಎ 12-ಸಿ:2676)ರ ನಡುವೆ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದ್ದು ಕಾರಿನ ಹಿಂಬದಿ ಸೀಟಲ್ಲಿದ್ದ ಮೆಸ್ಕಾಂ ಅಧಿಕಾರಿ ಆನಂದ ಉಕ್ಕುಡ ಎಂಬವರು ತೀವ್ರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರು ಚಾಲಕ ಲೇಖನ್ ಬನ್ನೂರು ಹಾಗೂ ಇನ್ನೋರ್ವರು ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Check Also

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಲಕ್ಷಾಂತರ ರೂ. ಹಣ ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಖಾತೆಯಿಂದ ಮತ್ತೊಂದು ಖಾತೆಗೆ 2,08,004 ರೂ. ಹಣ ವರ್ಗಾವಣೆಗೊಂಡಿರುವ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್‌ …

Leave a Reply

Your email address will not be published. Required fields are marked *

You cannot copy content of this page.