October 27, 2024
WhatsApp Image 2024-03-31 at 10.44.07 AM

ಕಡಬ : ಆಲಂಕಾರು- ಶಾಂತಿಮೊಗರು ರಸ್ತೆಯ ಕಯ್ಯಾಪ್ಪೆ ಎಂಬಲ್ಲಿ ಟೂರಿಸ್ಟ್ ಟೆಂಪೋ ಹಾಗು ಸಿಎನ್ ಜಿ ಸಾಗಾಟದ ವಾಹನದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಕೆಪುಳು ನಿವಾಸಿ ದಿನೇಶ ಹಾಗೂ ಕಾಣಿಯೂರು ನಿವಾಸಿ ಸುನೀಲ್ ಅವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ದಿನೇಶ್ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸುನೀಲ್ ಎಂಬವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ.

ಘಟನೆಯಿಂದ ಆಲಂಕಾರು – ಶಾಂತಿಮೊಗರು ರಸ್ತೆಯು ಎರಡು ಗಂಟೆ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಪುತ್ತೂರು ಅಗ್ನಿಶಾಮಕ ದಳ ಮತ್ತು ಕಡಬ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆ ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದರು.

About The Author

Leave a Reply

Your email address will not be published. Required fields are marked *

You cannot copy content of this page.