ಮಂಗಳೂರು: 2 ತಿಂಗಳು ಮೀನುಗಾರಿಕೆ ಸ್ಥಗಿತ…

ಮಂಗಳೂರು: ಇನ್ನೇನು ನಾಲ್ಕೈದು ದಿನಗಳೊಳಗೆ ಮುಂಗಾರು ಕರಾವಳಿಗೆ ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ ಸ್ಥಗಿತಗೊಳ್ಳಲಿದೆ. ಮಿನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್ ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ. ಸದ್ಯ ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ‌. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.

Check Also

ಉಡುಪಿ: ಗೋಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ..!

ಕುಂದಾಪುರ: ಜೂನ್ 25ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page.