![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬೆಂಗಳೂರು : ಬೆಂಗಳೂರಿನ ಮುರಗೇಶ್ ಪಾಳ್ಯದ ಎನ್ಎಎಲ್ ರಸ್ತೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜಧಾನಿ ನಡೆದಿದೆ.
ಕೊಲೆಯಾದ ದುರ್ದೈವಿ ಲೀಲಾ ಪವಿತ್ರ (26) ಎಂದು ತಿಳಿದುಬಂದಿದೆ. ಇನ್ನೂ ದಿನಕರ್ ಎಂಬಾತ ಲೀಲಾಳ ಎದೆ, ಹೊಟ್ಟೆ, ಕುತ್ತಿಗೆ ಎಲ್ಲೆಂದರಲ್ಲೇ ಚೂರಿಯಿಂದ 16ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಲೀಲಾ ಹಾಗೂ ಆರೋಪಿ ದಿವಾಕರ್ ಇಬ್ಬರು ಆಂಧ್ರ ಪ್ರದೇಶದ ಮೂಲದವರಾಗಿದ್ದಾರೆ. ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಲೀಲಾ ಕೆಲಸ ಮುಗಿಸಿ ಹೊರಗಡೆ ಬಂದ ವೇಳೆ ಆರೋಪಿ ಕೃತ್ಯ ಎಸಗಿದ್ದಾನೆ. ಯುವತಿಯ ಎದೆ, ಹೊಟ್ಟೆ ಹಾಗೂ ಕುತ್ತಿಗೆಗೆ ಸುಮಾರು 16 ಬಾರಿ ಇರಿದು ಕೊಲೆ ಮಾಡಿದ್ದಾನೆ.
ಲೀಲಾ ಹಾಗೂ ದಿವಾಕರ್ ಇಬ್ಬರು ಕಳೆದ ಐದು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಆದರೆ ಇಬ್ಬರದ್ದು ಬೇರೆ ಬೇರೆ ಜಾತಿ ಆಗಿದ್ದರಿಂದ ಯುವತಿಯ ಮನೆಯವರು ಇಬ್ಬರ ಮದುವೆಗೆ ವಿರೋಧ ಮಾಡಿದ್ದರು.
ಹೀಗಾಗಿ ಯುವತಿ ಕಳೆದ ಕೆಲ ದಿನಗಳಿಂದ ದಿವಾಕರ್ನನ್ನು ದೂರ ಮಾಡುತ್ತಿದ್ದಳು. ಇದರಿಂದ ಕೋಪಗೊಂಡಿರುವ ದಿವಾಕರ್ ಆಕೆ ಕೆಲಸ ಮುಗಿಸಿ ಕಂಪನಿಯಿಂದ ಹೊರ ಬರುತ್ತಿದ್ದಂತೆ ಯುವತಿಗೆ ಮನಸೋ ಇಚ್ಚೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.