ಉಡುಪಿ ಆಸುಪಾಸಿನ ನಾಲ್ಕು ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ ಜಿಲ್ಲಾಡಳಿತ

ಉಡುಪಿ: ಉಡುಪಿ ಆಸುಪಾಸಿನ ನಾಲ್ಕು ದ್ವೀಪಗಳಿಗೆ  ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ ಆಸುಪಾಸಿನ ಕಡಲ ತೀರದಲ್ಲಿರುವ ಬಾದರಗಢ ದ್ವೀಪ, ಮಿಡಲ್ ದ್ವೀಪ (ಕೋಟೆ), ಮಾಲ್ತೀಗುಡ್ಡ ದ್ವೀಪ ಹಾಗೂ  ಎಂಬ ನಾಲ್ಕು ದ್ವೀಪಗಳಿಗೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.