March 16, 2025
WhatsApp Image 2024-09-01 at 9.31.30 AM

ಉಡುಪಿ: ಖಾಸಗಿ ಫೈನಾನ್ಸ್‌ ಸಂಸ್ಥೆಯೊಂದಕ್ಕೆ ಮ್ಯಾನೇಜರ್‌ ಹಾಗೂ ಲೋನ್‌ ಆಫೀಸರ್‌ ಗಳು ಸೇರಿ 4 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಫೈನಾನ್ಸ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಕಳೆದ ಒಂದು ವರ್ಷದಿಂದ ಮ್ಯಾನೇಜರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾ ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುತ್ತಿದ್ದು , ಸಾಲದ ಹಣದಲ್ಲಿ 1,25,787 ರೂಪಾಯಿ ಹಣವನ್ನು ಫೈನಾನ್ಸಿಯಲ್‌ ಲಿಮಿಟೆಡ್‌ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿದ್ದಾನೆ.ಅದೇ ರೀತಿ ಲೋನ್‌ ಆಫೀಸರ್‌ ಗಳಾದ ಅಕ್ಷಯ್‌ 49,000 ರೂಪಾಯಿ ಹಾಗೂ ದೀಕ್ಷಿತ್‌ 3 ಲಕ್ಷ ರೂಪಾಯಿ ಹಣವನ್ನು ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಂಡು ಸಂಸ್ಥೆಯ ಮ್ಯಾನೇಜರ್‌ ಜತೆ ಸೇರಿ ಈ ಮೂವರು ಒಟ್ಟು 4,74,787 ರೂಪಾಯಿ ಹಣವನ್ನು ಸಂಸ್ಥೆಗೆ ಕಟ್ಟದೇ ವಂಚಿಸಿರುವುದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.