ಉಡುಪಿ : ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಕಾಣೆಯಾಗಿದ್ದ ಮೀನುಗಾರನ ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ

ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರನೊಬ್ಬನ ಶವವನ್ನು ಮೇಲಕ್ಕೆತಲಾಗಿದೆ.

ಆಪದ್ಭಾಂಧವ ಈಶ್ವರ್ ಮಲ್ಪೆ ಈ ಕಾರ್ಯಾಚರಣೆ ನಡೆಸಿದ್ದಾರೆ, ದ್ವಿ ಚಕ್ರ ವಾಹನದೊಂದಿಗೆ ಬಂದರಿಗೆ ಆಗಮಿಸಿದ್ದ ಮೀನುಗಾರ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದರು. ನೀರಿಗೆ ಬಿದ್ದ ಮಾಹಿತಿ ತಿಳಿದು ತತ್‌ಕ್ಷಣ ಧಾವಿಸಿ ಬಂದ ಈಶ್ವರ್ ಮಲ್ಪೆ ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಕ್ಕಿರಲಿಲ್ಲ. ಅದರೆ ಆತನ ಸ್ಕೂಟರ್‌ ಪತ್ತೆಯಾಗಿ ಹಗ್ಗದ ಸಹಾಯದಿಂದ ಮೇಲಕ್ಕೆತ್ತಲಾಯಿತು. ಇದೀಗ ಮೀನುಗಾರನ ಮೃತದೇಹ ಪತ್ತೆಯಾಗಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.