May 16, 2025
WhatsApp Image 2025-01-02 at 9.39.54 AM

ಸಂಕ್ರಾಂತಿ ಹಬ್ಬದ ನಂತರ ಸಿಎಂ ಸಿದ್ದರಾಮಯ್ಯ ಜೊತೆಯಲ್ಲಿ ಸಾರಿಗೆ ಮುಖಂಡರ ‌ಸಭೆ ನಡೆಯಲಿದೆ. ಈ ಸಭೆಯಲ್ಲಿ, ನಾಲ್ಕು ನಿಗಮಗಳ ಬಸ್​ಗಳ ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವಂತೆ ಸಾರಿಗೆ ನೌಕರರು ಸಿಎಂ‌ ಸಿದ್ದರಾಮಯ್ಯಗೆ ಮನವಿ ಮಾಡಲು ಈಗಾಗಲೇ ‌ಅಂಕಿ ಅಂಶಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಎಂಟಿಸಿ ಟಿಕೆಟ್ ದರ ಏರಿಕೆ ಮಾಡಿ 10 ವರ್ಷಗಳಾಗಿವೆ. ಕೆಎಸ್ಆರ್​ಟಿಸಿ ಟಿಕೆಟ್ ಏರಿಕೆ ಮಾಡಿ ಐದು ವರ್ಷಗಳಾಗಿವೆ. ಹಾಗಾಗಿ ನಿಗಮಗಳನ್ನು ನಡೆಸಲು ಕಷ್ಟ ಆಗುತ್ತಿದೆ. ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿದ್ದೇವೆ ಎಂದು ಮನವಿ ಮಾಡಲು ಸಾರಿಗೆ ಮುಖಂಡರು ಸಿದ್ಧವಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇತ್ತ ಕಳೆದ ವಾರ ಸಿಎಂ ಜೊತೆಗೆ ಸಾರಿಗೆ ಅಧಿಕಾರಿಗಳ ಜತೆ ನಡೆದಿದ್ದ ಸಭೆಯಲ್ಲಿ, ಟಿಕೆಟ್ ದರ ಏರಿಕೆ ಮಾಡಿದರೆ ಮಾತ್ರ ಬಿಎಂಟಿಸಿ, ಕೆಎಸ್ಆರ್​ಟಿಸಿ ಉಳಿಸಲು ಸಾಧ್ಯ ಎಂದು ಸಿಎಂಗೆ ಅಧಿಕಾರಿಗಳು ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ. ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಇಂಧನ‌ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಯಾಗಬೇಕೆಂದು ನಾಲ್ಕೂ ನಿಗಮಗಳು ಮನವಿ ಮಾಡಿವೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>