December 5, 2025
WhatsApp Image 2023-07-02 at 9.30.53 AM

ಪುತ್ತೂರು: ಮಗ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ನೇಣಿಗೆ ಶರಣಾದ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ಸಂಭವಿಸಿದೆ.

ಇಂದಿರಾನಗರದ ದಿ| ಪ್ರವೀಣ್‌ ಅವರ ಪತ್ನಿ ಕಾವ್ಯಾ (38) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್‌ ಕೂಡ ಯಾವುದೋ ಕಾರಣಕ್ಕೆ 7 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಇಹಲೋಕ ತ್ಯಜಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ರ ಕಾವ್ಯ ಅವರ ಪುತ್ರ ಪ್ರತೀಕ್‌ ಜೂ.30ರಂದು ಬೆದ್ರಾಳ ಸಮೀಪ ಸಂಭವಿಸಿದ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.