ವಿಟ್ಲ ಅತ್ಯಾಚಾರ ಪ್ರಕರಣ: ಆಘಾತಕಾರಿ ಮಾಹಿತಿ ಬಹಿರಂಗ

ವಿಟ್ಲದಲ್ಲಿ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಮಾಹಿತಿಗಳು ಹೊರ ಬರುತ್ತಿದ್ದು, ಹಲವರು ನಿರಂತರವಾಗಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ. ಆದರೆ ಈ ವಿಚಾರ ಬಾಲಕಿ ಮನೆಯವರಿಗೆ ತಿಳಿದಿರಲಿಲ್ಲ. ಜುಲೈ 27ರಂದು ರಾತ್ರಿಯಿಡಿ ಬಾಲಕಿ ಮನೆಯಿಂದ ಕಾಣೆಯಾಗಿದ್ದು, ಮನೆಮಂದಿ ಹುಡುಕಾಟ ನಡೆಸಿದ್ದರು. ಮರುದಿನ ಬಾಲಕಿ ಸಮೀಪದ ಪಾಳು ಮನೆಯಲ್ಲಿ ಪತ್ತೆಯಾಗಿದ್ದಳು. ಬಾಲಕಿಯನ್ನು ಕಮಲಾಕ್ಷ ಎಂಬಾತ ಪಾಳುಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂಬುದು ಮನೆಯವರು ಪ್ರಶ್ನಿಸಿದ ವೇಳೆ ತಿಳಿದು ಬಂದಿದೆ. ಅದೇ ರೀತಿ 2019ರಲ್ಲಿ ಜಯಪ್ರಕಾಶ ಎಂಬಾತನೂ ಅತ್ಯಾಚಾರ ಮಾಡಿದ್ದ ವಿಚಾರವೂ ತಿಳಿದು ಬಂದಿದೆ. ಅದಾದ ಬಳಿಕ ಅಕ್ಷಯ್‌, ಸುಕುಮಾರ್‌ , ರಾಜಾ ಎಂಬುವರು ತನ್ನ ಮೇಲೆ ಅತ್ಯಾಚಾರ ನಡೆಸಿರುವ ಬಗ್ಗೆ ಬಾಲಕಿ ಮನೆಯವರಿಗೆ ತಿಳಿಸಿದ್ದಾಳೆ. ಒಂದೇ ವರ್ಷದಲ್ಲಿ ಹಲವು ಬಾರಿ ಅತ್ಯಾಚಾರ ನಡೆಸಿರುವುದು ತಿಳಿದು ಬಂದಿದೆ.

Check Also

ಮಂಗಳೂರು: ಸ್ಕಿಡ್ಡಾಗಿ ಬಿದ್ದ ಸ್ಕೂಟರ್ – ಯುವಕ ಮೃತ್ಯು…!!

ಮಂಗಳೂರು: ನಗರದ ಸಮೀಪ ಯುವಕ ಚಲಾಯಿಸುತ್ತಿದ್ದ ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ …

Leave a Reply

Your email address will not be published. Required fields are marked *

You cannot copy content of this page.