ಉಡುಪಿ: ಶಿರ್ವದ ಆರೋಗ್ಯ ಮಾತಾ ದೇವಾಲಯದ ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ ವಿದ್ಯಾರ್ಥಿನಿ ರಿಯಾನ್ನ ಜೇನ್ ಡಿಸೋಜಾ( 20) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬೆಂಗಳೂರಿನಲ್ಲಿ ನಿಧನ ಹೊಂದಿದರು. ರಿಯಾನ್ನ ಜೇನ್ ಕಳೆದ ವರ್ಷ ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದರು. ಮಣಿಪಾಲ ಮತ್ತು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಇವರು ಬಿ.ಕಾಂ ಪದವಿ ಮುಗಿಸಿ ಎಂಕಾಂ ಪದವಿ ಪ್ರಾರಂಭಿಸುವಷ್ಟರಲ್ಲೇ ಇಹಲೋಕ ತ್ಯಜಿಸಿದ್ದಾರೆ. ಅತ್ಯುತ್ತಮ ಕಾರ್ಯಕ್ರಮ ಸಂಘಟಕಿಯಾಗಿದ್ದ ಇವರು, ವಿದ್ಯಾಭ್ಯಾಸದ ಜೊತೆಯಲ್ಲೇ ಪಠ್ಯೇತರ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದರು. ಇವರು ತಾಯಿ, ಸಹೋದರ ಮತ್ತು ಅಪಾರ ಸ್ನೇಹಿತರು ಮತ್ತು ಬಂಧು ಬಳಗದವರನ್ನು ಆಗಲಿದ್ದಾರೆ.
Check Also
ಕೇರಳದಲ್ಲಿ ‘ವೆಸ್ಟ್ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …