April 20, 2025
WhatsApp Image 2022-12-02 at 4.02.15 PM

ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕಾ ಬಂದರು ಬಳಿ ಬೋಟಿನಿಂದ ಬೋಟಿನಿಂದ ಮೀನು ಖಾಲಿ ಮಾಡುವಾಗ ಅಕಸ್ಮಿಕವಾಗಿ ನದಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ಮೃತರನ್ನು ಒರಿಸ್ಸಾ ಮೂಲದ ಪ್ರಮೋದ ಮಿನ್ಜ್(32) ಎಂದು ಗುರುತಿಸ ಲಾಗಿದೆ. ಇವರು ಗಂಗೊಳ್ಳಿ ಮೂಲದ ಪ್ರಭಾಕರ ಖಾರ್ವಿ ಎಂಬವರ ಶ್ರೀ ಯಕ್ಷೇಶ್ವರಿ ಎಂಬ ಬೋಟಿನಲ್ಲಿ ಇತರ ಮೀನುಗಾರರೊಂದಿಗೆ ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ನ.30ರಂದು ಗಂಗೊಳ್ಳಿ ಬಂದರು ಬಳಿ ಪಂಚಗಂಗಾವಳಿ ನದಿಯಲ್ಲಿ ಬೋಟನ್ನು ನಿಲ್ಲಿಸಿ ರಾತ್ರಿ 9.30ಕ್ಕೆ ಬೋಟಿನಿಂದ ಮೀನು ಖಾಲಿ ಮಾಡುತ್ತಿರುವಾಗ ಪ್ರಮೋದ ಮಿನ್ಜ್ ಆಕಸ್ಮಿಕವಾಗಿ ಆಯಾತಪ್ಪಿ ನದಿಯ ನೀರಿಗೆ ಬಿದ್ದು ಕಾಣೆಯಾಗಿದ್ದರು. ಸತತ ಹುಡುಕಾಟದ ಬಳಿಕ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>