![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಉಳ್ಳಾಲ: ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್ಬೋಟ್ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಜ.31ರಂದು ಬಾಲಕೃಷ್ಣ ಎಂಬವರ ಮಾಲಕತ್ವದ ಜಲ-ಮಾತಾ ಬೋಟು ಮೀನುಗಾರಿಕೆಗೆ ತೆರಳುತ್ತಿದ್ದಾಗ ಹಡಗಿನ ಅವಶೇಷಗಳಿಗೆ ತಾಗಿ ಜಖಂಗೊಂಡಿದೆ ಎನ್ನಲಾಗಿದೆ.
ಇನ್ನು ತಕ್ಷಣ ಹತ್ತಿರದಲ್ಲೇ ಇದ್ದ ಲಲಿತಾ ಸಾಗರ ಎಂಬ ಹೆಸರಿನ ಬೋಟಿನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಈ ಕುರಿತು ಕರಾವಳಿ ಕಾವಲು ಪಡೆಯ ಠಾಣೆಗೆ ದೂರು ನೀಡಲಾಗಿದೆ.