![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬಂಟ್ವಾಳ: ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಹಾಸನದಲ್ಲಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ ಮೃತಪಟ್ಟವರು. ಜನಾರ್ದನ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಸಂಜೆ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಕಾರು ಚಾಲಕರಾಗಿದ್ದ ಅವರು ಬಿಎಂಎಸ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು.