December 6, 2025
WhatsApp Image 2024-08-03 at 10.27.32 AM
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಗರದ ಕೃಷಿ ಇಲಾಖೆಗೆ ಸಂಬಂಧಿಸಿದ ಸೀಡ್‌ ಫಾರ್ಮ್ ರಸ್ತೆಯ ಸಮೀಪದ ಮನೆಯ ಮಹಿಳೆಯೊಬ್ಬರು ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಸಾವನ್ನಪ್ಪಿದವರು ನಿವೃತ್ತ ಬ್ಯಾಂಕ್‌ ಉದ್ಯೋಗಿ ಜೀವಂದರ್‌ ಪಡಿವಾಳ ಅವರ ಪತ್ನಿ ಸುಮಾಲಿನಿ ಜೈನ್‌ (63) ಎಂದು ತಿಳಿಯಲಾಗಿದೆ ‌
ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸ್ಥಳೀಯ ಆ್ಯಂಬುಲೆನ್ಸ್‌ ಚಾಲಕ ಜಲೀಲ್‌ ಮೃತದೇಹವನ್ನು ಮೇಲಕೆತ್ತಿದರು.
ಈ ಬಗ್ಗೆ ಬೆಳ್ತಂಗಡಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.