

- ಪ್ರತಿಷ್ಠಾಪನೆಯ ಮೊದಲು ಮೆಸ್ಕಾಂ, ಅಗ್ನಿಶಾಮಕ ನಿಗಮ/ಸ್ಥಳೀಯ ಸಂಸ್ಥೆಗಳಿಂದ ಅನುಮತಿಗಳನ್ನು ಪಡೆದು ಕೊಳ್ಳ ಬೇಕು. ಗಣಪತಿ ವಿಗ್ರಹ ಪ್ರತಿಷ್ಠಾನೆಯ ಸ್ಥಳದ ಮಾಲಕರ ಅನುಮತಿ ಪಡೆದುಕೊಳ್ಳಬೇಕು. ಗಣೇಶ ಪೆಂಡಾಲುಗಳನ್ನು ಸುರಕ್ಷಿತವಾಗಿ ಹಾಕಲು ವ್ಯವಸ್ಥೆ ಮಾಡಬೇಕು. ಈ ಪೆಂಡಾಲ್ ಮಳೆ, ಗಾಳಿ, ಬೆಂಕಿಗಳಿಂದ ಸುರಕ್ಷಿತವಾಗಿರುವಂತೆ ನಿಗಾವಹಿಸಲು ಸೂಚಿಸಲಾಗಿದೆ.