ಉಡುಪಿ: ಹೆಜಮಾಡಿ ಟೋಲ್ ಶುಲ್ಕ ಗೊಂದಲ ಕುರಿತು ಇಂದು(ಡಿ.3) ಜನಪ್ರತಿನಿಧಿಗಳ ಸಭೆ

ಉಡುಪಿ: ಸುರತ್ಕಲ್ ಟೋಲ್ ಗೇಟ್ ರದ್ದುಗೊಳಿಸಿ, ಅಲ್ಲಿನ ಶುಲ್ಕವನ್ನು ಹೆಜಮಾಡಿ ಟೋಲ್‌ನಲ್ಲಿ ವಿಲೀನಗೊಳಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಹೆಜಮಾಡಿ ಟೋಟ್ ದರ ಪರಿಷ್ಕರಣೆ ಸಂಬಂಧ ಡಿ.3ರ ಬೆಳಗ್ಗೆ 9ಕ್ಕೆ ತಾ.ಪಂ. ಕಚೇರಿಯಲ್ಲಿ ಜನ ಪ್ರತಿನಿಧಿಗಳ ಸಭೆ ನಡೆಸಲಿದೆ. ಈ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತೆ ಟೋಲ್‌ ದರ ಪರಿಷ್ಕರಣೆಯಾಗುವ ಸಾಧ್ಯತೆಯೂ ಇದೆ. ಸಭೆಯಲ್ಲಿ ಸಚಿವ ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗ ಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಎಸ್ಪಿ ಹಾಕೆ ಅಕ್ಷಯ್ ಮಚೀಂದ್ರ, ಜಿಲ್ಲೆಯ ಶಾಸಕರು,ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Check Also

ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ

ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ್ದು, ಘಟನೆ …

Leave a Reply

Your email address will not be published. Required fields are marked *

You cannot copy content of this page.