March 4, 2026
WhatsApp Image 2026-03-04 at 9.30.29 AM

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ಪರಾರಿಯಾಗಿದ್ದ ಪ್ರಕರಣ ಸಂಬಂಧಿಸಿ ಆರೋಪಿಗೆ ಸುಳ್ಯದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 118/24 (ಕಲಂ 121(1), 132, 262 BNS) ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ಸುಳ್ಯ ಕೋರ್ಟಿನಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ. ಮೋಹನ್ ಬಾಬು ಅವರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.

ಕಲಂ 121(1) ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟಲು ವಿಫಲರಾದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ, ಕಲಂ 132 ರಡಿಯಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟದಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ, ಕಲಂ 262 ರಡಿಯಲ್ಲಿ ಕಾನೂನುಬದ್ಧ ವಶಕ್ಕೆ ಪಡೆಯುವ ಸಂದರ್ಭದಲ್ಲಿ ತಡೆ ಉಂಟುಮಾಡಿದ ಕಾರಣಕ್ಕೆ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ. ದಂಡ ಕಟ್ಟಲು ವಿಫಲರಾದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ.  ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ  ಪ್ರೀತಿ ಎಂ.ಸಿ. ಅವರು ವಾದ ಮಂಡಿಸಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.