December 5, 2025
WhatsApp Image 2025-06-04 at 2.15.31 AM

ಕಾಪು :ಲಾರಿಯೊಂದು ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದ್ದೆ ಸಾವನಪ್ಪಿದ ಘಟನೆ ಮೂಳೂರು ರಾಹೆ 66ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಮೂಳೂರು ಫಿಶರೀಸ್ ರಸ್ತೆ ಬಳಿಯ ನಿವಾಸಿ ಧನಂಜಯ ಎ. ಸುವರ್ಣ (43) ಎಂದು ಗುರುತಿಲಾಗಿದೆ.

ಮೂಳೂರು ಬಾರ್ ನ ಮುಂಭಾಗದಲ್ಲಿ ರಸ್ತೆ ದಾಟಲೆಂದು ಡಿವೈಡರ್ ಮೇಲೆ ನಿಂತಿದ್ದ ಧನಂಜಯ ಅವರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಲಾರಿಯ ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಅವರ ಮೇಲೆ ಲಾರಿಯ ಚಕ್ರ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದು, ಲಾರಿಯ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

 

About The Author

Leave a Reply

Your email address will not be published. Required fields are marked *

You cannot copy content of this page.