March 27, 2025
WhatsApp Image 2023-09-04 at 9.13.43 AM

ಮಂಗಳೂರು: ಗೆಳೆಯರ ಜೊತೆ ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ  ಭಾನುವಾರ ಸಂಜೆ ನಡೆದಿದೆ.

ಗಾಯಗೊಂಡ ಯುವಕನನ್ನು ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌ (23) ಎಂದು ಗುರುತಿಸಲಾಗಿದೆ. ಸಫ್ವಾನ್‌ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸಫ್ವಾನ್‌ ಗೆಳೆಯರೊಂದಿಗೆ ಆಟವಾಡಿ ಮನೆಗೆ ತೆರಳುತ್ತಿದ್ದ ವೇಳೆ ಸ್ಥಳೀಯನೇ ಆಗಿರುವ ಯುವಕ ಚೂರಿ ಇರಿದಿದ್ದಾನೆ ಎನ್ನಲಾಗಿದೆ. ಕೆಲದಿನಗಳಿಂದ ಕಳವಾರು ಭಾಗದಲ್ಲಿ ಮದ್ಯ ವ್ಯಸನಿಯೊಬ್ಬ ಹಲ್ಲೆ ನಡೆಸಿದ್ದ ಪ್ರಕರಣ ದಾಖಲಾಗಿತ್ತು. ಇದೇ ಹಿನ್ನೆಲೆಯಲ್ಲಿ ಚೂರಿ ಇರಿತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.