ಉಡುಪಿ: ಕಾರ್ಕಳ ಅತ್ಯಾಚಾರ ಪ್ರಕರಣ, ಡ್ರಗ್ಸ್ ಜಾಲದ ಬಗ್ಗೆ ಎಲ್ಲ ಆಯಾಮಗಳಲ್ಲಿ ತನಿಖೆ – ಉಡುಪಿ ಎಸ್ಪಿ ಮಾಹಿತಿ

ಉಡುಪಿ : ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣದ ತನಿಖೆ ಒಂದು ಆಯಾಮದಲ್ಲಿ ನಡೆದರೆ ,ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿರುವುದು ಪೊಲೀಸರಿಗೂ ಸವಾಲಾಗಿ ಪರಿಣಮಿಸಿದೆ.ಪ್ರಮುಖ ಆರೋಪಿ ಅಲ್ತಾಫ್ ಅತ್ಯಾಚಾರ ಎಸಗಿದ್ದರೆ ಅಭಯ್ ಎಂಬಾತ ಕೃತ್ಯ ನಡೆದ ಸ್ಥಳಕ್ಕೆ ಡ್ರಗ್ಸ್ ತಂದು ಕೊಟ್ಟಿದ್ದ. ಡ್ರಗ್ಸ್ ತಂದು ಕೊಟ್ಟವರಿಗೆ ತಿರುಪತಿ, ಬೆಂಗಳೂರು ತನಕ ಸಂಪರ್ಕ ಇತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಿಂದೂ ಯುವತಿಯನ್ನು ಆಗಸ್ಟ್ 24 ರಂದು ಅಪಹರಿಸಿ ಕೌಡೂರು ಬಳಿಯ ರಂಗನಪಲ್ಕೆಯ ಕಾಡಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ರಿಚರ್ಡ್ ಕ್ವಾಡ್ರಸ್ ಹಾಗೂ ಅಭಯ್‌ ಎಂಬ ಮೂವರನ್ನು ಬಂಧಿಸಲಾಗಿದೆ. ಜೊತೆಗೆ ಮತ್ತಿಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು ಈತನಕ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಉಡುಪಿ ಎಸ್ಪಿ ಮಾಹಿತಿ ನೀಡಿದ್ದಾರೆ. ಇನ್ನು ಯುವತಿಗೆ ನೀಡಲಾದ ಡ್ರಗ್ಸ್ ಮೂಲದ ಬಗ್ಗೆ ತನಿಖೆ ನಡೆದಿದ್ದು ಅದು ಎಂಡಿಎಂಎ ಎಂಬುದು ಗೊತ್ತಾಗಿದೆ. ಇದನ್ನು ಪರೀಕ್ಷೆಗಾಗಿ ಎಫ್ ಎಸ್ ಎಲ್ ಗೆ ಕಳಿಸಲಾಗಿದೆ. ಡ್ರಗ್ಸ್ ಬೆಂಗಳೂರು, ತಿರುಪತಿಯಿಂದ ಸರಬರಾಜು ಆಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಅಭಯ್ ಹಾಗೂ ಇನ್ನಿಬ್ಬರು ಶಂಕಿತರನ್ನು ಪೊಲೀಸರು ಬೆಂಗಳೂರು ಹಾಗೂ ತಿರುಪತಿಗೆ ಕರೆದೊಯ್ದಿದ್ದಾರೆ. ಜೊತೆಗೆ ಬೆಂಗಳೂರು ಸಿಸಿಬಿ ಪೊಲೀಸರ ಸಹಕಾರವನ್ನೂ ಪಡೆಯಲಾಗಿದೆ ಎಂದು ಉಡುಪಿ ಎಸ್ಪಿ ಮಾಹಿತಿ ನೀಡಿದ್ದಾರೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.