ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಭೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀ ಹೆದ್ದಾರಿ 169A ತೀರ್ಥಹಳ್ಳಿ -ಮಲ್ಪೆ ರಸ್ತೆಯ ಆಗುಂಬೆ ಘಾಟ್ ನ 6,7 ಹಾಗೂ 11ನೇ ತಿರುವಿನಲ್ಲಿ ಮಳೆಯಿಂದಾಗಿ ತಡೆಗೋಡೆ ಕುಸಿದ ಹಿನ್ನಲೆ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು.

ಈ ನಡುವೆ ಶಿವಮೊಗ್ಗ ವಿಭಾಗದ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಸದರಿ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ನೀಡಲು ಕೋರಿದ ಹಿನ್ನಲೆ ಉಡುಪಿ ಜಿಲ್ಲಾಧಿಕಾರಿ ಆಗುಂಭೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.