ಕಾರ್ಕಳ: ಬಸ್ಸಿಗೆ ಹತ್ತುವ ವೇಳೆ ಬಿದ್ದು ಚಕ್ರದಡಿ ಸಿಲುಕಿ ವ್ಯಕ್ತಿ ಮೃತ್ಯು

ಕಾರ್ಕಳ: ಬಸ್ಸಿಗೆ ಹತ್ತುವಾಗ ನಿಯಂತ್ರಣ ತಪ್ಪಿ ಚಕ್ರದಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಿರ್ಗಾನದ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ಡಿ.೦೪ ರ ಭಾನುವಾರ ಸಂಜೆ ನಡೆದಿದೆ. ಮೃತಪಟ್ಟಿರುವ ವ್ಯಕ್ತಿ ಚಿಕ್ಕಲ್ ಬೆಟ್ಟಿನ ಕೃಷ್ಣ ನಾಯಕ್(71) ಎಂದು ಗುರುತಿಸಲಾಗಿದೆ.

ಇವರು ಹಿರ್ಗಾನದಿಂದ ಚಿಕ್ಕಲ್ ಬೆಟ್ಟು ಕ್ರಾಸ್’ಗೆ ಹೋಗಲು ಬಸ್ಸು ಹತ್ತುವ ವೇಳೆ ಈ ಘಟನೆ ಸಂಭವಿಸಿದೆ.

ತಕ್ಷಣವೇ ಅಂಬ್ಯುಲೆನ್ಸ್(108) ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.