ಮಗನ ಕೊಲೆಗೆ ತಂದೆಯೇ ಸುಪಾರಿ: ಬೆಚ್ಚಿ ಬಿಳಿಸಿದ ನಾಪತ್ತೆ ಪ್ರಕರಣ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೇ ನೆತ್ತರು ಹರಿದಿದೆ. ಸಣ್ಣ ಪುಟ್ಟ ಚಾಕು ಇರಿತಗಳಿಂದ ಕೂಡಿದ್ದ ಹುಬ್ಬಳ್ಳಿಯ ಜನರನ್ನು ಬೆಚ್ಚಿ ಬಿಳಿಸಿದೆ. ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ.

ಹೌದು..ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ. ಉದ್ಯಮಿ ಭರತ್ ಜೈನ್‌ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸಹೋದರ ದೂರು ನೀಡಿದ್ದರು. ಮಗ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ತಂದೆ ಭರತ ಜೈನ್ ಹೈಡ್ರಾಮ ಮಾಡಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ತಂದೆ ಮೇಲೆಯೇ ಅನುಮಾನ ಮೂಡಿತ್ತು.

ಭರತ್ ಜೈನ್‌ರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಮಗನ ಹತ್ಯೆಗೆ ಸ್ಥಳೀಯ ಹಂತಕರಿಗೆ ಸುಪಾರಿ ನೀಡಿದ್ದಾಗಿ ತಂದೆ ಬಾಯ್ದಿಟ್ಟಿದ್ದಾರೆ. ಇವರ ಹೇಳಿಕೆ ಆಧರಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮಗನ ಹತ್ಯೆಗೆ ಸುಪಾರಿ ಕೊಟ್ಟಿದ್ದು ಏಕೆ ಎಂಬ ಕಾರಣ ಇನ್ನೂ ಗೊತ್ತಾಗಿಲ್ಲ.

ಪ್ರಕರಣ ದಾಖಲಾದ 48 ಗಂಟೆಯೊಳಗೆ ಕೇಶ್ವಾಪುರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

Check Also

ಮಣಿಪಾಲ: ಪರೀಕ್ಷೆಯಲ್ಲಿ ಅನುತ್ತೀರ್ಣ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.ಮೃತ ಬಾಲಕನನ್ನು ಕಾಪು …

Leave a Reply

Your email address will not be published. Required fields are marked *

You cannot copy content of this page.