ಕಾಂಗ್ರೆಸ್ ಸಭೆಯಲ್ಲಿ ಹೊಡೆದಾಟ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೇರಿ ಇಬ್ಬರ ಬಂಧನ

ಹೊಸಪೇಟೆ; ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ದೂರು, ಪ್ರತಿದೂರು ದಾಖಲಾದ ಹಿನ್ನೆಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಟಿಕೆಟ್ ಆಕಾಂಕ್ಷಿಗಳ ಸಭೆಯ ವೇಳೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ಯೋಗಲಕ್ಷ್ಮೀ ಮತ್ತು ಬೆಂಬಲಿಗ ಸಂದೀಪ್ ಅವರನ್ನು ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜನವರಿ 2ರಂದು ನಗರದ ಖಾಸಗಿ ಹೊಟೇಲ್ ಒಂದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ನೇತೃತ್ವದಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯ ವೇಳೆ ಗಲಾಟೆ ನಡೆದಿದೆ ಎನ್ನಲಾಗಿದೆ.

ಶಿಲ್ಪಾ ಎಂಬವರ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ.

Check Also

ಮಣಿಪಾಲ: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ..! ಸ್ಥಳೀಯರಲ್ಲಿ ಆತಂಕ

ಮಣಿಪಾಲ: ಉಡುಪಿ ನಗರದ ಮಣಿಪಾಲದ ಬಳಿಯ ಪೆರಂಪಳ್ಳಿಯ ಮನೆಯೊಂದರ ಅಂಗಳದಲ್ಲಿ ಶುಕ್ರವಾರ ರಾತ್ರಿ ಚಿರತೆ ಸಂಚಾರ ಕಂಡು ಬಂದಿದ್ದು, ಘಟನೆ …

Leave a Reply

Your email address will not be published. Required fields are marked *

You cannot copy content of this page.