![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಮಂಗಳೂರು : ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರದ ಬಂದರು ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ನಗರದ ನ್ಯೂಚಿತ್ರ ಟಾಕೀಸಿನ ಬಳಿಯ ಸುಬ್ಬಯ್ಯಶೆಟ್ಟಿ ಕಂಪೌಂಡ್ ನ ರಾಜೇಶ್(52) ಬಂಧಿತ ಆರೋಪಿಯಾಗಿದ್ದಾನೆ.
ಕೇರಳದ ಕಾಸರಗೋಡಿನಲ್ಲಿ ಬಂದರು ಠಾಣಾ ಎಎಸ್ಐ ಓಂ ದಾಸ್ ಮತ್ತು ಹೆಡ್ ಕಾನ್ಸ್ಟೇಬಲ್ ಮಚ್ಚೇಂದ್ರನಾಥ ಅವರು ಆರೋಪಿ ರಾಜೇಶ್ನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.