ಶಾಸಕ ರೇಣುಕಾಚಾರ್ಯ ತಮ್ಮನ ಪುತ್ರ ಸಾವು ಪ್ರಕರಣ: ವಿನಯ್ ಗುರೂಜಿ ಆಶ್ರಮಕ್ಕೆ ಪೊಲೀಸರ ಭೇಟಿ

ಚಿಕ್ಕಮಗಳೂರು: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ತುಂಗಾನದಿ ಕಾಲುವೆಯಲ್ಲಿ ಕಾರಿನ ಸಹಿತ ಶವವಾಗಿ ಪತ್ತೆಯಾಗಿದ್ದರು. ಈ ಹಿನ್ನಲೆಯಲ್ಲಿ ಅವರು ವಿನಯ್ ಗುರೂಜಿ ಭೇಟಿಯಾಗೋದಕ್ಕೆ ಹೋಗುತ್ತಿರೋದಾಗಿ ಹೇಳಿ ಮನೆಯಿಂದ ತೆರಳಿ, ಶವವಾಗಿ ಪತ್ತೆಯಾಗಿದ್ದ ಕಾರಣ, ಪೊಲೀಸರು ಆಶ್ರಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಅಕ್ಟೋಬರ್ 31ರಂದು ಶಾಸಕ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿಗದ್ದೆಯ ವಿನಯ್ ಗುರೂಜಿ ಭೇಟಿಯಾಗಿ ಬರೋದಾಗಿ ಮನೆಯಲ್ಲಿ ಹೇಳಿ ತೆರಳಿದ್ದರು. ಆದ್ರೇ ಹೀಗೆ ತೆರಳಿದ್ದಂತ ಅವರು ನಾಪತ್ತೆಯಾಗಿದ್ದರು. ಆದ್ರೇ ನಾಲ್ಕು ದಿನದ ಬಳಿಕ ತುಂಗಾ ನದಿ ಕಾಲುವೆಯಲ್ಲಿ ಕಾರಿನ ಸಹಿತ ಬಳಿಕ ಶವವಾಗಿ ಪತ್ತೆಯಾಗಿದ್ದರು.

ಈ ಹಿನ್ನಲೆಯಲ್ಲಿ ಇಂದು ವಿನಯ್ ಗುರೂಜಿ ಆಶ್ರಮಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೇ ಚಂದ್ರಶೇಖರ್ ಬಂದಿದ್ದರ ಬಗ್ಗೆ ಮಾಹಿತಿಯನ್ನು ವಿನಯ್ ಗುರೂಜಿ ಬಳಿ ಪಡೆದಿದ್ದಾರೆ. ಈ ವೇಳೆ ಪೊಲೀಸರಿಗೆ ಅವರು ಚಂದ್ರಶೇಖರ್ ಬಂದಿದ್ದೇನೋ ನಿಜ. ಆಶ್ರಮಕ್ಕೆ ಭೇಟಿ ನೀಡುವಂತ ಹೊತ್ತು ಇದಲ್ಲ. ಇಷ್ಟು ಲೇಟ್ ನೈಟ್ ಯಾಕೆ ಬಂದೆ ಎಂಬುದಾಗಿ ಪ್ರಶ್ನಿಸಿದ್ದಾಗಿಯೂ ಹೇಳಿರುವುದಾಗಿ ತಿಳಿದು ಬಂದಿದೆ.

ಆದ್ರೇ ಚಂದ್ರಶೇಖರ್ ಅವರು ನಾಪತ್ತೆ ಬಳಿಕ ಅವರಿಗೆ ಒಂದೇ ಮೊಬೈಲ್ ಸಂಖ್ಯೆಯಿಂದ 10 ಬಾರಿ ಕರೆ ಬಂದಿರೋದಾಗಿ ತಿಳಿದು ಬಂದಿದೆ. ಈ ಮೂಲಕ ಈಗ ಅವರ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೂಡ ಸಿಕ್ಕಿದೆ. ಈ ಬಗ್ಗೆಯೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.