
ಪ್ರೇಮಿಗಳಿಬ್ಬರ ನಡುವೆ ವೈಮನಸ್ಸು ಉಂಟಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದಿದೆ.
ಬನಹಟ್ಟಿಯ KHDC ಕಾಲೋನಿಯಲ್ಲಿ ಪವಿತ್ರಾ (19) ನೇಣಿಗೆ ಶರಣಾಗಿದ್ದು, ಆಸ್ಕಿ ಗ್ರಾಮದಲ್ಲಿ ಪ್ರಿಯಕರ ಕಾರ್ತೀಕ ನಾಯಕ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಿಯತಮೆ ಆತ್ಮಹತ್ಯೆ ವಿಚಾರ ತಿಳಿದು ನೇಣಿಗೆ ಶರಣಾದ ಕಾರ್ತೀಕ, ನಿನ್ನೆ ಇಬ್ಬರ ಮಧ್ಯೆಯು ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು.
ಇದಾದ ಬಳಿಕ ಮನನೊಂದು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪವಿತ್ರಾ ಆತ್ಮಹತ್ಯೆ ಸುದ್ದಿ ಕೇಳಿ ಪ್ರಿಯಕರ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
