ಸೌಜನ್ಯ ಪ್ರಕರಣ : ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ

ಬೆಳ್ತಂಗಡಿ  : ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ನಡೆಯುತ್ತಿರುವ ಹೋರಾಟದ ನಡುವೆ ಇಂದು ‌ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಲಿದೆ.

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಗಿರೀಶ ಭಾರಧ್ವಾಜ್, ನವೀನ್ ಕುಮಾರ್ ನೆರಿಯ ಬೆಳ್ತಂಗಡಿ ಮತ್ತು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೆಪ್ಟೆಂಬರ್ 8ರಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದಿಸಲಿದ್ದಾರೆ.

ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯರವರನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ, ಸಿಐಡಿ ಮತ್ತು ಸಿಬಿಐಯಿಂದ ತನಿಖೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಇತ್ತೀಚೆಗೆ ತೀರ್ಪು ನೀಡಿತ್ತು. ಬಳಿಕ ಸೌಜನ್ಯ ಪರ ಪ್ರತಿಭಟನೆಯ ಕಾವು ಜೋರಾಗತೊಡಗಿದೆ. ನಿಜವಾದ ಅಪರಾಧಿಗಳನ್ನು ಬಂಧಿಸಬೇಕು, ತನಿಖೆಯ ಆರಂಭದಲ್ಲಿ ಲೋಪ ಎಸಗಿರುವ ತನಿಖಾಧಿಕಾರಿ ಮತ್ತು ವೈದ್ಯಾಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ವ್ಯಕ್ತವಾಗುತ್ತಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.