ವಕೀಲರ ಮೇಲೆ ಹಲ್ಲೆ ಆರೋಪ : ಪುಂಜಾಲಕಟ್ಟೆ ಠಾಣೆಯ ಎಸ್.ಐ ಸುತೇಶ್ ಎಸ್.ಪಿ. ಕಚೇರಿಗೆ ವರ್ಗಾವಣೆ..!!!

ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರವರು ಮತ್ತು ಸಿಬ್ಬಂದಿಗಳು ಜಾಗದ ವಿಚಾರವೊಂದರ ಪ್ರಕರಣದಲ್ಲಿ ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ಅವರ ಮೇಲೆ ಕ್ರಮಕೈಗೊಳ್ಳುವಂತೆ ವಕೀಲರ ಸಂಘದಿಂದ ಪ್ರತಿಭಟನೆ ಕೂಡ ನಡೆಸಲಾಗಿತ್ತು ಎಂದು ತಿಳಿದು ಬಂದಿದೆ.

ಈ ಬಗ್ಗೆ ಯಾವುದೇ ವಿಚಾರಣೆ ನಡೆಸದೆ ಇಲಾಖೆಯು ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರನ್ನು ನೇರವಾಗಿ ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ..

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.