ಸಾಮಾಜಿಕ ಜಾಲತಾಣದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ ಬರೆದ ಇಬ್ಬರಿಗೆ ದಂಡ

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿಯಾದ ಬರಹ ಬರೆದ ಇಬ್ಬರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ.

ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಸೇರಿದಂತೆ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದೋಷಿಗಳಿಗೆ ಕ್ಷಮೆ ಯಾಚಿಸುವ ಜತೆಗೆ ತಲಾ 25 ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಸುನಿಲ್ ಕುಮಾರ್, ನನ್ನ ವಿರುದ್ಧ ಜಾಲತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.