ಮಂಗಳೂರು: ಮೆಡಿಕಲ್‌ ರೆಪ್‌ ಯುವಕ ಆತ್ಮಹತ್ಯೆ..!

ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ.

ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಉಡುಪಿ: ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ. ಸ್ವಿಫ್ಟ್ …

Leave a Reply

Your email address will not be published. Required fields are marked *

You cannot copy content of this page.