June 2, 2025 6:36:07 PM
WhatsApp Image 2023-08-09 at 2.08.41 PM

ಬೆಂಗಳೂರು: ಶೀಲ ಶಂಕಿಸಿ ಪತ್ನಿಗೆ ವಿಚ್ಛೇದನ ನೀಡಿರುವ ಅಥವಾ ಕೊಲೆ ಮಾಡಿರುವ ಘಟನೆಗಳ ಬಗ್ಗೆ ನಾವು ಕೇಳಿದ್ದೇವೆ.

ಅದರೆ ಇಲ್ಲೊಬ್ಬ ಗಂಡ ಪತ್ನಿಗೆ ಸ್ಥಳೀಯರು ಕಳ್ಳಿ ಎಂದು ನಿಂದಿಸುತ್ತಿದ್ದರಿಂದ ಬೇಸರಗೊಂಡು ಆಕೆಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಕುಂದಲಹಳ್ಳಿ ನಿವಾಸಿ  ಸರಿತಾ (35)  ಕೊಲೆಯಾದ ಮಹಿಳೆ.ತಾರನಾಥ್‌  (40) ಬಂಧಿತ ಆರೋಪಿ.ಈ ದಂಪತಿಗಳು  ದಕ್ಷಿಣ ಕನ್ನಡ ಜಿಲ್ಲೆಯ ಮೂಲದವರು.ಮಂಗಳೂರು ಮೂಲದ ತಾರನಾಥ್‌ ಮತ್ತು ಸರಿತಾ 11 ವರ್ಷಗಳ ಹಿಂದೆ ಮದುವೆಯಾಗಿದ್ದು, ಈ ಹಿಂದೆ ಮಂಗಳೂರಿನ ಮುಲ್ಕಿಯಲ್ಲಿ ವಾಸವಾಗಿದ್ದರು.ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ತೆರಳಿ ವೈಟ್‌ಫೀಲ್ಡ್‌ನಲ್ಲಿ ನೆಲೆಸಿದ್ದರು.ಅಲ್ಲಿ ತಾರನಾಥ್‌ ತನ್ನ ಪತ್ನಿ ಜತೆ ಸೇರಿ ಪಾನಿಪುರಿ ವ್ಯಾಪಾರ ನಡೆಸುತ್ತಿದ್ದನು.ಈ ಹಿಂದೆ ಮುಲ್ಕಿಯಲ್ಲಿ ವಾಸವಾಗಿದ್ದ ಸಂದರ್ಭದಲ್ಲಿ ಸರಿತಾ ವಿರುದ್ಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣವೊಂದು ದಾಖಲಾಗಿತ್ತು.ಹೀಗಾಗಿ ಆಕೆಯನ್ನು ಸ್ಥಳೀಯರು ಕಳ್ಳಿ ಎಂದು ಹೀಯಾಳಿಸುತ್ತಿದ್ದರು.ಇದರಿಂದ ತಾರನಾಥ್‌ ಕೂಡಾ ನೊಂದುಕೊಂಡಿದ್ದ.ಇದರಿಂದ ತೀವ್ರ ಬೇಸರಗೊಂಡಿದ್ದ ಆತ ಭಾನುವಾರ ಸಂಜೆ ಆಕೆಯ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾನೆ.ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಧೈರ್ಯ ಸಾಲದೆ ನೇರವಾಗಿ ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದಾನೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ವೈಟ್‌ಫೀಲ್ಡ್‌ ಠಾಣೆಯ ಪೊಲೀಸರು ತಿಳಿಸಿದ್ದಾರೆ.

 

About The Author

Leave a Reply

Your email address will not be published. Required fields are marked *

<p>You cannot copy content of this page.</p>