ಬೆಳ್ತಂಗಡಿ : ಪರವಾನಿಗೆ ಇಲ್ಲದೇ ನದಿಗಳಿಂದ ಅಕ್ರಮವಾಗಿ ಮರಳು ದಂಧೆ ನಡೆಸಿ ಮರಳು ಸಾಗಿಸುತ್ತಿದ್ದ ಲಾರಿಗಳ ವಿರುದ್ದ ಬೆಳ್ತಂಗಡಿ ತಹಶೀಲ್ದಾರ್ ತಂಡ ಕಾರ್ಯಾಚರಣೆದ್ದಾರೆ. ಆ.9 ರಂದು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಿಂದ ಅಕ್ರಮವಾಗಿ ನದಿಗಳಿಂದ ಮರಳು ತುಂಬಿಸಿಕೊಂಡು ಕಕ್ಕಿಂಜೆ ಕಡೆ ಸಾಗಾಟ ಮಾಡುತ್ತಿದ್ದ ಒಂದು ಲಾರಿ ಹಾಗೂ ಒಂದು ಟೆಂಪೋವನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ಅಕ್ರಮ ಮರಳು ಸಾಗಾಟದ ಎರಡು ಲಾರಿಗಳ ಮತ್ತು ಮರಳಿನ ಬಗ್ಗೆ ಕ್ರಮ ಕೈಗೊಳ್ಳಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಬೆಳ್ತಂಗಡಿ ತಹಶೀಲ್ದಾರ್ ವರದಿಯನ್ನು ಸಲ್ಲಿಸಿದ್ದಾರೆ.
Check Also
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!
ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …