ಉಳ್ಳಾಲ : ನಾಲ್ಕು ವಾಹನಗಳ ಸರಣಿ ಅಪಘಾತ- ಅಪ್ಪಚ್ಚಿಯಾದ ಕಾರು

ಉಳ್ಳಾಲ : ಸರಣಿ ಅಪಘಾತದಲ್ಲಿ ವ್ಯಾಗನರ್ ಕಾರೊಂದು ಅಪ್ಪಚ್ಚಿಯಾದ ಘಟನೆ ರಾಷ್ಟ್ರೀಯ 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರಿನ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ.ಇದರಿಂದಾಗಿ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.

ಅದೇ ವೇಳೆ ವ್ಯಾಗನರ್ ಕಾರಿನ ಹಿಂಭಾಗದಲ್ಲಿದ್ದ ಕೇರಳ ಸಾರಿಗೆ ಬಸ್ಸು ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅಪ್ಪಚ್ಚಿಯಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ. ವ್ಯಾಗನಾರ್ ಕಾರಿನ ಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Check Also

ಮುಲ್ಕಿ: ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಲಾರಿ- ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸರೆ

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿಯ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿನ ವಾಹನಗಳಿಗೆ ಡಿಕ್ಕಿಯಾಗಿದೆ. ಪರಿಣಾಮ …

Leave a Reply

Your email address will not be published. Required fields are marked *

You cannot copy content of this page.