ಪುತ್ತೂರು: ಮನೆಗೆ ನುಗ್ಗಿದ ಕಳ್ಳರು ; ಚಿನ್ನಾಭರಣ ದೋಚಿ ಪರಾರಿ

ಉಡುಪಿ: ಮನೆಯೊಂದಕ್ಕೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಎಗರಿಸಿದ ಘಟನೆ ನಗರದ ಪುತ್ತೂರು ಬಳಿ ನಡೆದಿದೆ.

ಪುತ್ತೂರು ಗ್ರಾಮದ ಎಲ್‌ವಿಟಿ ದೇವಸ್ಥಾನದ ಬಳಿ ತನ್ನ ತಾಯಿಯೊಂದಿಗೆ ವಾಸವಿದ್ದ ಪೂಜಾ ಸಾಲ್ಯಾನ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ಸಮಯ ಮನೆಯ ಎದುರಿನ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು, ಬೆಡ್ ರೂಮಿನ ಗೊದ್ರೇಜ್ ನಲ್ಲಿದ್ದ 16 ಗ್ರಾಂ ತೂಕದ 1 ಚಿನ್ನದ ಬಳೆ, 4 ಗ್ರಾಂ ತೂಕದ 1 ಚಿನ್ನದ ಪೆಂಡೆಂಟ್ ಸೇರಿ ಒಟ್ಟು 20 ಗ್ರಾಂ ತೂಕದ ಸುಮಾರು 96,000 ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ …

Leave a Reply

Your email address will not be published. Required fields are marked *

You cannot copy content of this page.