ವಿಜಯಪುರ : ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಪಲ್ಟಿಯಾಗಿ ಗರ್ಭಿಣಿ ಮೃತಪಟ್ಟ ಘಟನೆ ವಿಜಯಪೂರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ರಸ್ತೆಯ ಮಧ್ಯೆ ನಡೆದಿದೆ. ಗರ್ಭಿಣಿಯನ್ನು ಆಸ್ಪತ್ರೆಗೆ ತರುವಾಗ ವಿಜಯಪುರ ನಗರದ ಮಾರ್ಗದಲ್ಲಿ ಘಟನೆ ನಡೆದಿದೆ. ಭಾಗ್ಯಶ್ರೀ ಪರಣ್ಣನವರ ಮೃತಪಟ್ಟಿರುವ ಗರ್ಭಿಣಿ. ಜಿಲ್ಲೆಯ ತಾಳಿಕೋಟಿಯಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ತೆರಳುವಾಗ ಅಪಘಾತ ಸಂಭವಿಸಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.