ಕೊಚ್ಚಿ : ‘ವರಹಾರೂಪಂ’ ಹಾಡು ಒಳಗೊಂಡಿರುವ ತುಳುನಾಡ ದೈವಾಧಾರಿತ ಕಥೆಯ ಸೂಪರ್ ಹಿಟ್ ಚಲನಚಿತ್ರ ‘ಕಾಂತಾರ’ ಕ್ಕೆ ಮತ್ತೆ ವಿಘ್ನ ಎದುರಾಗಿದೆ.
‘ವರಹಾರೂಪಂ’ ಹಾಡು ಒಳಗೊಂಡಿರುವ ಸಿನಿಮಾ ಪ್ರದರ್ಶನ ಮಾಡಲು ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಾಪಿರೈಟ್ ಉಲ್ಲಂಘಿಸಿದ ಆರೋಪಕ್ಕೆ ಕಾಂತಾರ ಸಿನಿಮಾ ನಿರ್ದೇಶಕ , ನಟ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರು ಅವರಿಗೆ ನಿರೀಕ್ಷಣ ಜಾಮೀನು ಅನುಮತಿಸಿದ ನ್ಯಾಯಾಲಯ ಫೇಬ್ರವರಿ 12 ಮತ್ತು 13 ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 1 ರ ವರೆಗೆ ತನಿಖಾಧಿಕಾರಿ ಮುಂದೆ ಹಾಜರಾಗುಂತೆ ಸೂಚಿಸಿದೆ. ಹೈಕೋರ್ಟ್ ಆದೇಶದಲ್ಲಿ ಏನಿದೆ..? ಕೇರಳ ಹೈಕೋರ್ಟ್ ನ ನ್ಯಾಯಮೂರ್ತಿ ಎ ಬದರುದ್ದೀನ್ ಅವರು “‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ನಿಂದ ಮಧ್ಯಂತರ ಅಥವಾ ಅಂತಿಮ ಆದೇಶ ಬರೋವರೆಗೆ ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ’ ಹಾಡನ್ನು ಬಳಕೆ ಮಾಡುವಂತಿಲ್ಲ. ಈ ಪ್ರಕರಣದ ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶ ಇದೆ’ ಎಂದು ಬದ್ರುದೀನ್ ಹೇಳಿದ್ದಾರೆ. ತೈಕುಡಂ ಬ್ರಿಡ್ಜ್ನವರು ಕೋಯಿಕ್ಕೋಡ್ನ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ‘ವರಾಹ ರೂಪಂ’ ಹಾಡಿನಲ್ಲಿ ಬಳೆ ಆದ ಟ್ಯೂನ್ ‘ನವರಸಂ’ ಹಾಡಿನದ್ದು ಎನ್ನುವ ಆರೋಪ ಮಾಡಲಾಗಿತ್ತು. ಈ ಪ್ರಕರಣದ ಸದ್ಯ ಕೋರ್ಟ್ನಲ್ಲಿ ವಿಚಾರಣೆ ಆಗುತ್ತಿದೆ. ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪಗಳ ಕುರಿತು ತ್ವರಿತ ನಿರ್ಧಾರವನ್ನು ಪಡೆಯಲು ಅವರು ಸೂಕ್ತ ಸಿವಿಲ್ ನ್ಯಾಯಾಲಯಕ್ಕೆ ಹೋಗಬಹುದು ಎಂದು ನ್ಯಾಯಾಲಯದ ಆದೇಶವು ಸ್ಪಷ್ಟಪಡಿಸಿದೆ.
Check Also
ಜೂ. 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶಾಲೆಗಳಿಗೆ …