“ನಾವು ಆ ವಿಚಾರಕ್ಕೆ ವಿಚ್ಛೇದನ ಪಡೆದಿಲ್ಲ” – ಚಂದನ್‌-ನಿವೇದಿತಾ ಸ್ಪಷ್ಟನೆ

ಬೆಂಗಳೂರು : ನಾವಿಬ್ಬರೂ ಸ್ವಯಿಚ್ಛೆಯಿಂದ ವಿಚ್ಛೇದನ ಪಡೆಯುತ್ತಿದ್ದು, ನಮ್ಮ ಬಗ್ಗೆ ಸುಳ್ಳು ವದಂತಿಗಳನ್ನು ಸುಖಾಸುಮ್ಮನೆ ಹಬ್ಬಿಸಬೇಡಿ ಎಂದು ಚಂದನ್ ಶೆಟ್ಟಿ ಮನವಿ ಮಾಡಿದ್ದಾರೆ

ವಿಚ್ಛೇದನ ಅರ್ಜಿ ಸಲ್ಲಿಸಿದ ನಂತರ ಇಂದು ಬಹಿರಂಗವಾಗಿ ಪತ್ರಿಗೋಷ್ಠಿಯಲ್ಲಿ ಮಾತನಾಡಿದ ಚಂದನ್, ಜನ ಗಾಳಿ ಮಾತುಗಳಿಗೆ ಕಿವಿಗೊಡಬೇಡಿ ಎಂದ್ರು.

ನಿವೇದಿತಾ ಯಾವುದೇ ರೀತಿಯ ಜೀವನಾಂಶ ಕೇಳಲಿಲ್ಲ, ನಾನು ಕೊಟ್ಟಿಲ್ಲ, ಮಕ್ಕಳಿಗೆ ಸಂಬಂಧ ಪಟ್ಟಂತೆ ಯಾವ ಕಾರಣಕ್ಕೂ ನಮ್ಮ ವಿಚ್ಛೇದನ ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ರು

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನದ ವಿಚಾರ ಎಲ್ಲೆಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳೆದ ಒಂದು ವರ್ಷಗಳಿಂದ ಇವರು ಈ ಬಗ್ಗೆ ಚರ್ಚೆ ಮಾಡುತ್ತಿದ್ದರು. ಆದರೆ ಎಲ್ಲಿಯೂ ಸುದ್ದಿಯಾಗದಂತೆ ನೋಡಿಕೊಂಡಿದ್ದರು.

ಇದೀಗ ದಿಢೀರ್‌ ವಿಚ್ಛೇದನದವರೆಗೂ ಹೋಗಿದ್ದು, ಅಭಿಮಾನಿಗಳಿಗೆ ಅಚ್ಚರಿ ಆಗುವಂತೆ ಮಾಡಿದೆ. ಅಲ್ಲದೆ, ಸಾಮಾಜಿ ಜಾಲತಾಣಗಳಿದಂಲೂ ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದು, ಇದೀಗ ಇಬ್ಬರೂ ಜಂಟಿ ಸುದ್ದಿಗೋಷ್ಠಿ ಮೂಲಕ ಹಲವು ವದಂತಿಗಳಿಗೆ ತೆರೆ ಎಳೆದಿದ್ದಾರೆ.

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.